Header Ads Widget

Responsive Advertisement

ನಾಗರಿಕ ವಿಮಾನಯಾನ ಭದ್ರತಾ ವಿಭಾಗದ ಮಹಾನಿರ್ದೇಶಕರಾಗಿ ಕೊಡಗಿನ ಗಣಪತಿ ನೇಮಕ


 ಹಿರಿಯ ಐಪಿಎಸ್ ಅಧಿಕಾರಿ ಕೊಡಗಿನ ಮನೆಯಪಂಡ ಎ.ಗಣಪತಿ ಅವರನ್ನು ನಾಗರಿಕ ವಿಮಾನಯಾನದ ಭದ್ರತಾ ವಿಭಾಗದ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಪ್ರಧಾನ ಮಂತ್ರಿ ನೇತೃತ್ವದ ಸಚಿವ ಸಂಪುಟ ಸಮಿತಿಯ ಅನುಮೋದನೆ ಮೇರೆಗೆ ಹಿರಿಯ ಕೊಡಗು ಮೂಲದ ಐಪಿಎಸ್ ಅಧಿಕಾರಿ ಮನೆಯಪಂಡ ಎ.ಗಣಪತಿ ಅವರನ್ನು ನಾಗರಿಕ ವಿಮಾನಯಾನದ ಭದ್ರತಾ ವಿಭಾಗದ ಮಹಾನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಗೃಹ ಇಲಾಖೆಯ ವಕ್ತಾರರಾಗಿ ಸೇವೆ ಸಲ್ಲಿಸಿದ್ದ ಎಂ.ಎ.ಗಣಪತಿ ಅವರನ್ನು 2016ರಲ್ಲಿ ಉತ್ತರಾಖಂಡ್ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ಗಣಪತಿ ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್‍ಎಫ್) ವಿಶೇಷ ಮಹಾ ನಿರ್ದೇಶಕರಾಗಿ ಮತ್ತು ವಿಮಾನ ನಿಲ್ದಾಣದ ಮುಖ್ಯಸ್ಥರಾಗಿ ಕರ್ತವ್ಯದಲ್ಲಿದ್ದರು. 1999ರಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ(ಸಿಬಿಐ)ಯಲ್ಲೂ ಸೇವೆ ಸಲ್ಲಿಸಿದ್ದ ಮನೆಯಪಂಡ ಎ.ಗಣಪತಿ, ಕಳೆದ 30 ವರ್ಷಗಳ ಸೇವೆಯಲ್ಲಿ ಸೋನೆಬಾಂದ್ರಾ, ಮೊರಾದಾಬಾದ್ ನಗರ ಮತ್ತು ಹಾರ್ ದೋಯಿ ಸೇರಿದಂತೆ ಉತ್ತರ ಭಾರತದ ಆಯಕಟ್ಟಿನ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ.

1986ನೇ ಸಾಲಿನ ಉತ್ತರಾಖಂಡ್​ ಕೇಡರ್​ನ ಹಿರಿಯ ಐಪಿಎಸ್​ ಅಧಿಕಾರಿಯಾಗಿರುವ ಎಂ.ಎ. ಗಣಪತಿ ಅವರು ದಕ್ಷಿಣ ಕೊಡಗಿನ ಕುಂದಾ ಗ್ರಾಮದ ಮನೆಯಪಂಡ ಅಪ್ಪಯ್ಯ ಮತ್ತು ಪ್ರೇಮಲತಾ ದಂಪತಿಯ ಪುತ್ರ. ಈ ಹಿಂದೆ ಬಿಸಿಎಎಸ್​ ಮುಖ್ಯಸ್ಥರ ಹುದ್ದೆಯಲ್ಲಿದ್ದ ರಾಕೇಶ್​ ಅಸ್ತಾನ ಅವರನ್ನು ಗಡಿ ಭದ್ರತಾ ಪಡೆಯ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಿದ ಬಳಿಕ ಈ ಹುದ್ದೆ ಖಾಲಿ ಉಳಿದಿತ್ತು. ಈಗ ಆ ಸ್ಥಾನಕ್ಕೆ ಎಂ.ಎ. ಗಣಪತಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಗಣಪತಿ ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್) ವಿಶೇಷ ಮಹಾ ನಿರ್ದೇಶಕರಾಗಿ ಮತ್ತು ವಿಮಾನ ನಿಲ್ದಾಣದ ಮುಖ್ಯಸ್ಥರಾಗಿ ಕರ್ತವ್ಯದಲ್ಲಿದ್ದರು.

ನಾಗರಿಕ ವಿಮಾನಯಾನ ಸಚಿವಾಲಯ ಕಳುಹಿಸಿದ್ದ ಗಣಪತಿ ಅವರ ನೇಮಕಾತಿ ಪ್ರಸ್ತಾವನೆಗೆ ಮಂಗಳವಾರ ಪ್ರಧಾನ ಮಂತ್ರಿ ನೇತೃತ್ವದ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಈ ಹಿಂದೆ ಬಿಸಿಎಎಸ್ ಮುಖ್ಯಸ್ಥರ ಹುದ್ದೆಯಲ್ಲಿದ್ದ ರಾಕೇಶ್ ಅಸ್ತಾನ ಅವರನ್ನು ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರನ್ನಾಗಿ ನೇಮಕ ಮಾಡಿದ ಬಳಿಕ ಈ ಹುದ್ದೆ ಖಾಲಿ ಉಳಿದಿತ್ತು. ಈ ಹಿನ್ನಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ. ಗಣಪತಿ ಅವರನ್ನು ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. 1986ರ ಸಾಲಿನ ಐಪಿಎಸ್ ಅಧಿಕಾರಿಯಾದ ಗಣಪತಿ ಅವರು 2010ರಿಂದ ಕೇಂದ್ರ ಗೃಹ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

1986ರ ಸಾಲಿನ ಐಪಿಎಸ್ ಅಧಿಕಾರಿಯಾದ ಗಣಪತಿ ಅವರು ಗೃಹ ಇಲಾಖೆಯ ವಕ್ತಾರರಾಗಿ ಸೇವೆ ಸಲ್ಲಿಸಿದ್ದರು. ನಂತರ 2016ರಲ್ಲಿ ಉತ್ತರಾಖಂಡ್​ ರಾಜ್ಯದ ಪೊಲೀಸ್​ ಮಹಾ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು. 1999ರಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ(ಸಿಬಿಐ)ಯಲ್ಲೂ ಸೇವೆ ಸಲ್ಲಿಸಿದ್ದ ಗಣಪತಿ ಅವರು, ಕಳೆದ 30 ವರ್ಷಗಳ ತಮ್ಮ ಸೇವೆಯಲ್ಲಿ ಉತ್ತರ ಭಾರತದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.