Header Ads Widget

Responsive Advertisement

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪುಣ್ಯಕೋಟಿ ವಾಣಿಜ್ಯ ಸಂಕೀರ್ಣ ಹಾಗೂ ಅತಿಥಿ ಗೃಹ ಉದ್ಘಾಟನಾ ಸಮಾರಂಭ


ಚೆಟ್ಟಳ್ಳಿಯಲ್ಲಿ ಜ. 15 ರಂದು ಬೆಳಿಗ್ಗೆ 7 ಗಂಟೆಗೆ ಪಶುಪತಿನಾಥ, ನಂದಿ, ಶ್ರೀಕೃಷ್ಣ, ಪುಣ್ಯಕೋಟಿ ಮೂರ್ತಿಗಳ ಲೋಕಾರ್ಪಣೆಗೊಳ್ಳಲಿದ್ದು, ಬೆಳಿಗ್ಗೆ 10 ಗಂಟೆಗೆ ಶ್ರೀ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ  ಪುಣ್ಯಕೋಟಿ ವಾಣಿಜ್ಯ ಸಂಕೀರ್ಣ ಹಾಗೂ ಅತಿಥಿ ಗೃಹ ಉದ್ಘಾಟನಾ ಸಮಾರಂಭ ನಡೆಯಲಿದೆ.


ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಶಕ್ತಿ ದಿನ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಭಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ರಘೂಜಿ, ವಕೀಲ ಪಿ. ಕೃಷ್ಣಮೂರ್ತಿ, ಮಡಿಕೇರಿ ಗಣೇಶ್ ಮಡಿಕಲ್ಸ್ ಮಾಲೀಕ ಡಿ.ಐ. ಪುರುಷೋತ್ತಮ, ಉದ್ಯಮಿ ಹಾಗೂ ಕಾಫಿ ಬೆಳೆಗಾರ ಚೇರಳ ತಮ್ಮಂಡ ಎ. ಮುದ್ದಯ್ಯ, ಕಾಫಿಬೆಳೆಗಾರರಾದ ಎಂ.ಎಸ್. ಮಹೇಂದ್ರ ಹಾಗೂ ಎಂ.ಎಂ. ಹೇಮ, ಸುಂಟಿಕೊಪ್ಪ ವಿಜಯ ಪ್ಲಾಂಟೇಶನ್‍ನ ಎಸ್.ಜಿ. ಶ್ರೀನಿವಾಸ್ ಹಾಗೂ ವಿಜಯಲಕ್ಷ್ಮಿ ಪಾಲ್ಗೊಳ್ಳಲಿದ್ದಾರೆ.

ವಾಣಿಜ್ಯ ಸಂಕೀರ್ಣ ಮತ್ತು ಅತಿಥಿ ಗೃಹ ಉದ್ಘಾಟನೆ ಕಾರ್ಯಕ್ರಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಹಿರಿಯ ಸಹಕಾರಿ ಹಾಗೂ ಮಾಜಿ ಸಚಿವ ಎಂ.ಸಿ. ನಾಣಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ, ಉಪಾಧ್ಯಕ್ಷ ಕೇಟೋಳಿರ ಎಸ್. ಹರೀಶ್ ಪೂವಯ್ಯ, ಸಹಕಾರ ಸಂಘಗಳ ಉಪನಿಂಬಂಧಕ ಬಿ.ಕೆ. ಸಲೀಂ, ಸಹಾಯಕ ನಿಂಬಂಧಕ ಹೆಚ್.ಡಿ. ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ, ಪಶ್ಚಿಮ ಘಟ್ಟ ಸಂರಕ್ಷಣಾ ಪಡೆಯ ಅಧ್ಯಕ್ಷ ರವಿ ಕುಶಾಲಪ್ಪ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಬಿ.ಡಿ. ಮಂಜುನಾಥ್, ಬಿ.ಕೆ. ಚಿಣ್ಣಪ್ಪ, ಉಷಾ ತೇಜಸ್ವಿನಿ, ಎಸ್.ಬಿ. ಭರತ್ ಕುಮಾರ್, ಕನ್ನಂಡ ಎ. ಸಂಪತ್, ಚೇರಳ ಶ್ರೀಮಂಗಲ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ಎಸ್. ರಾಘವಯ್ಯ, ಚೆಟ್ಟಳ್ಳಿ ಕೊಡವ ಸಮಾಜದ ಅಧ್ಯಕ್ಷ ಮುಳ್ಳಂಡ ಎಂ. ಚಂಗಪ್ಪ, ಚೆಟ್ಟಳ್ಳಿ ಪ್ರೌಢಶಾಲೆ ಅಧ್ಯಕ್ಷ ಪೇರಿಯನ ಪಿ. ಜಯಾನಂದ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಸೋಮೆಯಂಡ ದಿಲೀಪ್ ಅಪ್ಪಚ್ಚು, ಮಾಜಿ ಅಧ್ಯಕ್ಷರಾದ ಬಿದ್ದಂಡ ಎ. ಅಚ್ಚಯ್ಯ, ಕೊಂಗೇಟಿರ ಎಂ. ಅಪ್ಪಣ್ಣ, ಕಾಫಿ ಬೆಳೆಗಾರ ಕೊಂಗೇಟಿರ ಕುಸುಮ್ ಪೊನ್ನಪ್ಪ ಭಾಗವಹಿಸಲಿದ್ದಾರೆ.


Search Coorg Media: Coorg's Largest Online Media Network