ಮಳೆಗಾಲ ಪ್ರವಾಹ ಪೂರ್ವ ಮುನ್ಬೆಚ್ಚರಿಕೆ ಕ್ರಮವಾಗಿ ಬೇತ್ರಿಗೆ ಜಿಲ್ಲಾಧಿಕಾರಿ ಭೇಟಿ
ಬೇತ್ರಿ, ಮೇ.29; ಮಳೆಗಾಲ ಪ್ರವಾಹ ಪೂರ್ವ ಮುನ್ಬೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರ ಮತ್ತು ಅಧಿಕಾರಿ ವರ್ಗ ವರ್ಷಂಪ್ರತಿ ಪ್ರವಾಹಕ್ಕೆ ತುತ್ತಾಗುವ ಬೇತ್ರಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಲಿನ ಮಸೀದಿ ರಸ್ತೆಯಲ್ಲಿ ಸಾಗಿ ಗ್ರಾಮಸ್ಥರನ್ನು ಭೇಟಿ ಮಾಡಿ ಮುನ್ನೆಚ್ಚರಿಕೆ ಹಾಗೂ ಅಗತ್ಯವಾಗಿ ಆಗಬೇಕಾದ ಕಾಮಗಾರಿ ಬಗ್ಗೆ ಚರ್ಚಿಸಿದರು.
ಇದೇ ಸಂದರ್ಭ ಗ್ರಾಮಸ್ಥರು ಪ್ರವಾಹ ಸಂದರ್ಭ ಮುಳುಗಡೆಯಾಗುವ ಸಾರ್ವಜನಿಕ ರಸ್ತೆಯನ್ನು ಎತ್ತರಿಸಲು ಹಾಗೂ ಪ್ರವಾಹದ ನೀರು ಮನೆಗಳಿಗೆ ನುಗ್ಗದಂತೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಇದೇ ಸಂದರ್ಭ ಉಪ ವಿಭಾಗಾಧಿಕಾರಿಗಳು, ವೀರಾಜಪೇಟೆ ತಹಶೀಲ್ದಾರ್ ಯೋಗಾನಂದ, ಕಂದಾಯ ನಿರೀಕ್ಷಕರು ಇತ್ಯಾದಿ ಅಧಿಕಾರಿಗಳಿದ್ದರು.
ವರದಿ; ಮಮ್ಮದಾಲಿ, ಬೇತ್ರಿ.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network