Header Ads Widget

Responsive Advertisement

ಅಪಘಾತಗಳನ್ನು ತಗ್ಗಿಸಲು ರಸ್ತೆ ಅಭಿವೃದ್ದಿಯ ಎಲ್ಲಾ ಹಂತಗಳಲ್ಲಿ ಸುರಕ್ಷತೆ ಕುರಿತ ಲೆಕ್ಕಪರಿಶೋಧನೆ ಕಡ್ಡಾಯಗೊಳಿಸಲಾಗಿದೆ: ಶ್ರೀ ನಿತಿನ್ ಗಡ್ಕರಿ

ಅಪಘಾತಗಳನ್ನು ತಗ್ಗಿಸಲು ರಸ್ತೆ ಅಭಿವೃದ್ದಿಯ ಎಲ್ಲಾ ಹಂತಗಳಲ್ಲಿ ಸುರಕ್ಷತೆ ಕುರಿತ ಲೆಕ್ಕಪರಿಶೋಧನೆ ಕಡ್ಡಾಯಗೊಳಿಸಲಾಗಿದೆ: ಶ್ರೀ ನಿತಿನ್ ಗಡ್ಕರಿ


ಅಪಘಾತಗಳನ್ನು ತಗ್ಗಿಸಲು ರಸ್ತೆ ಅಭಿವೃದ್ಧಿಯ ಎಲ್ಲಾ ಹಂತಗಳಲ್ಲಿ ಸುರಕ್ಷತೆ ಕುರಿತ ಲೆಕ್ಕ ಪರಿಶೋಧನೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿಎಂ.ಎಸ್.ಎಂ. ಸಚಿವ ಶ್ರೀ ನಿತಿನ್ ಗಡ್ಕರಿ ಹೇಳಿದ್ದಾರೆ.

ಅಪಘಾತಗಳಿಂದ ಸುರಕ್ಷತೆ ಕುರಿತ ವಿಚಾರ ಸಂಕಿರಣವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರುಭಾರತ ಮತ್ತು ಇತರೆ ಅಭಿವೃದ್ಧಿ ಶೀಲ ರಾಷ್ಟ್ರಗಳಲ್ಲಿ ಹೆಚ್ಚಿನ ಪ್ರಮಾಣದ ಅಪಘಾತಗಳ ದರ ಇರುವುದನ್ನು ನಾವು ನೋಡುತ್ತಿದ್ದೇವೆಪ್ರತಿ ವರ್ಷ 1.5 ಲಕ್ಷ ಮಂದಿ ಅಪಘಾತಗಳಿಂದ ಮೃತಪಡುತ್ತಿದ್ದುಇವು ಕೋವಿಡ್ ಸಾವುಗಳಿಗಿಂತ ಅಧಿಕ ಎಂದರು.

ಬರುವ 2030  ವೇಳೆಗೆ ಅಪಘಾತಗಳು ಮತ್ತು ಸಾವುಗಳನ್ನು ಶೂನ್ಯಕ್ಕೆ ಇಳಿಸುವ ಗುರಿ ಇದ್ದುಇದರಲ್ಲಿ ಶೇ 50 ಅಪಘಾತಗಳನ್ನು ತಗ್ಗಿಸಬೇಕಾಗಿದೆಅಪಘಾತಗಳ ಸಾವಿನಲ್ಲಿ  ದ್ವಿಚಕ್ರ ವಾಹನಗಳ ಪಾಲು ಶೇ 50 ರಷ್ಟಿದೆಈಗಿನ ಸಮಯದಲ್ಲಿ ಮೋಟಾರು ವಾಹನ ಸುರಕ್ಷತೆ ಮತ್ತು ರಕ್ಷಣೆ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಜಾಗತಿಕ ವಾಹನ ತಾಂತ್ರಿಕ ನಿಪುಣತೆಯ ತಂತ್ರಜ್ಞಾನ ಸಾಕಷ್ಟು ಪ್ರಬುದ್ಧತೆಯಿಂದ ಕೂಡಿದೆ ಮತ್ತು ಅಪಘಾತ ಸಂದರ್ಭದಲ್ಲಿ ಸಾವುಗಳನ್ನು ತಗ್ಗಿಸುವ ತಾಂತ್ರಿಕತೆಯಲ್ಲಿ ಸುಧಾರಣೆ ತರಬೇಕಾಗಿದೆ ಎಂದ ಸಚಿವರುಚಾಲಕರ ತರಬೇತಿಯ ಮಹತ್ವದ ಬಗ್ಗೆ ಒತ್ತಿ ಹೇಳಿದರುಅತ್ಯಾಧುನಿಕ ತರಬೇತಿ ಸಂಸ್ಥೆಗಳು ಮತ್ತು ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಉತ್ತಮ ರಸ್ತೆಗಳನ್ನು ನಿರ್ಮಿಸುವುದು ಮತ್ತು ರಸ್ತೆ ಮೂಲ ಸೌಕರ್ಯ ಸುಧಾರಣೆ ಮಾಡುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆನಮ್ಮ ಗುರಿ ಸಾಧನೆ ಮತ್ತು ಜಾಗೃತಿ ಮೂಡಿಸಲು ಎಲ್ಲಾ ಪಾಲುದಾರರ ಸಹಕಾರಸಂಪರ್ಕ ಮತ್ತು ಸಮನ್ವಯತೆ ಅಗತ್ಯವಾಗಿದೆ ಎಂದು ಸಚಿವ ಶ್ರೀ ನಿತಿನ್ ಗಡ್ಕರಿ ಹೇಳಿದರು.


Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,