‘ಕನ್ನಡಕ್ಕಾಗಿ ನಾವು’ ಗೀತಗಾಯನ ಕಾರ್ಯಕ್ರಮ
ಮಡಿಕೇರಿ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ‘ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಸಾಂಸ್ಕತಿಕ ಹಾಗೂ ಬೀದಿ ನಾಟಕ ಜಾಗೃತಿ ಕಾರ್ಯಕ್ರಮವು ಕುಶಾಲನಗರದ ಕೊಡಗು ಜಿಲ್ಲಾ ವಿದ್ಯಾ ಸಾಗರ ಕಲಾ ವೇದಿಕೆ ವತಿಯಿಂದ ಮಂಗಳವಾರ ಜರುಗಿತು.
ಮಾಲ್ದಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಮೀರ್, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ವಿಜಯ್ ಕುಮಾರ್ ಅವರು ಕಂಜರ ನುಡಿಸುವ ಮೂಲಕ ಚಾಲನೆ ನೀಡಿದರು.
ಗ್ರಾ.ಪಂ.ಸದಸ್ಯರಾದ ಮೊಹಮದ್ದಲಿ, ಶಿಕ್ಷಕರರಾದ ಈಶ್ವರಿ, ಧನ್ಯ, ಅಮರಯ್ಯ, ಪ್ರತಿಮಾ, ಸೋನಿ, ಪ್ರಸನ್ನ ಇತರರು ಇದ್ದರು. ಪ್ರೌಢಶಾಲಾ ಸಹ ಶಿಕ್ಷಕರಾದ ಮಹಮದ್ ಶರೀಫ್ ಅವರು ಮಾತನಾಡಿದರು.
ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಇ.ರಾಜು ಮತ್ತು ತಂಡದವರಿಂದ ಕನ್ನಡಕ್ಕಾಗಿ ನಾವು ಅಭಿಯಾನ ಕುರಿತು ಗೀತಗಾಯನ ಮತ್ತು ಬೀದಿ ನಾಟಕ ಪ್ರದರ್ಶಿಸಲಾಯಿತು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network