ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮಡಿಕೇರಿ ಡಿ.16: ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. 2021-22 ನೇ ಸಾಲಿಗೆ ಪ್ರಿ-ಮೆಟ್ರಿಕ್ ಹಾಗೂ ಪೋಸ್ಟ್- ಮೆಟ್ರಕ್ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ https://scholarships.gov.in ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.
ಕೊಡಗು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಈ ಯೋಜನೆ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ಮಡಿಕೇರಿ ದೂ:ಸಂ: 08272-295829 ಅಥವಾ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಮಡಿಕೇರಿ ಮೊಬೈಲ್ ಸಂ:-8073192914, ಸೋಮವಾರಪೇಟೆ ದೂ:-9008685129 ಮತ್ತು ವಿರಾಜಪೇಟೆ ದೂ:- 9900883654 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಇಲಾಖೆಯ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network