Header Ads Widget

Responsive Advertisement

ಮಾ.12 ರಂದು ‘ರಾಷ್ರ್ಟೀಯ ಲೋಕ್ ಅದಾಲತ್’ ಬ್ಯಾಂಕರ್ಸ್‍ಗಳ ಪೂರ್ವಭಾವಿ ಸಭೆ

ಮಾ.12 ರಂದು ‘ರಾಷ್ರ್ಟೀಯ ಲೋಕ್ ಅದಾಲತ್’ ಬ್ಯಾಂಕರ್ಸ್‍ಗಳ ಪೂರ್ವಭಾವಿ ಸಭೆ


ಮಡಿಕೇರಿ ಫೆ.22: ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ರಾಷ್ರ್ಟೀಯ "ಲೋಕ್ ಅದಾಲತ್’ ಗಾಗಿ ಬ್ಯಾಂಕರ್ಸ್ ಗಳ ಪೂರ್ವಭಾವಿ ಸಭೆ ನಡೆಯಿತು.  

ಪ್ರಾರಂಭದಲ್ಲಿ ಜಿಲ್ಲಾ ಅಗ್ರಣಿ ಬ್ಯಾಂಕ್‍ನ ಮುಖ್ಯಸ್ಥರಾದ ಆರ್.ಕೆ.ಬಾಲಚಂದ್ರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಹಾಗೂ ಬ್ಯಾಂಕರ್ಸ್‍ಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. 

ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಮಾರ್ಚ್ 12 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಹೆಚ್ಚಿನ ಬ್ಯಾಂಕ್‍ಗಳು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು. 

ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ರ್ಟೀಯ ಲೋಕ್ ಅದಾಲತ್’ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿ 270 ಕೇಸ್‍ಗಳು ಈಗಾಗಲೇ ವಿಚಾರಣೆಯ ವಿವಿಧ ಹಂತದಲ್ಲಿ ನ್ಯಾಯಾಲಯದಲ್ಲಿದ್ದು ಲೋಕ ಅದಾಲತ್‍ನ ಸದುಪಯೋಗ ಪಡೆದುಕೊಳ್ಳುವಂತೆ ಬ್ಯಾಂಕರ್ಸ್‍ಗಳಿಗೆ ಕರೆ ನೀಡಿದರು. 

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ  ನ್ಯಾಯಾಧೀಶರಾದ ಎನ್.ಸುಬ್ರಮಣ್ಯ ಅವರು ಮಾತನಾಡಿ ಲೋಕ ಅದಾಲತ್‍ನಲ್ಲಿ ಹಲವು ಪ್ರಕರಣಗಳನ್ನು ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಇತ್ಯರ್ಥಪಡಿಸಲಾಗುವುದು. ಅಲ್ಲದೆ ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣಗಳು ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಎಂದು ನ್ಯಾಯಾಧೀಶರು ವಿವರಿಸಿದರು. 

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಚೆಕ್ಕು ಅಮಾನ್ಯದ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣಗಳು, ಎಲ್ಲಾ ಸಾರ್ವಜನಿಕರಿಗೆ, ಕಕ್ಷಿದಾರರಿಗೆ, ಬ್ಯಾಂಕ್‍ಗಳಿಗೆ ಮತ್ತು ಹಣಕಾಸು ಸಂಸ್ಥೆಗಳಿಗೆ ಹಾಗೂ ಇತರೆ ಸಂಘ ಸಂಸ್ಥೆಗಳಿಗೆ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಲೋಕ ಅದಾಲತ್ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದರು. 

ಪ್ರತಿ ದಿನ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳನ್ನು ಹಮ್ಮಿಕೊಂಡು ನ್ಯಾಯಾಧೀಶರು ಮತ್ತು ನುರಿತ ವಕೀಲರು ಮಧ್ಯಸ್ಥಿಕೆ ವಹಿಸಿ ಉಭಯ ಪಕ್ಷಕಾರರು ತಮ್ಮ ಪ್ರಕರಣವನ್ನು ಬಗೆಹರಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡುತ್ತಾರೆ ಎಂದು ಅವರು ಹೇಳಿದರು. 

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುವುದು ಎಂದರು. 

ಈ ಆದೇಶದ ವಿರುದ್ಥ ಯಾವುದೇ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಒಂದು ವೇಳೆ ಕೋವಿಡ್ ಕಾರಣದಿಂದಾಗಿ ಕಕ್ಷಿದಾರರಿಗೆ ನ್ಯಾಯಾಲಯಕ್ಕೆ ಖುದ್ದಾಗಿ ಬರಲು ಸಾಧ್ಯವಾಗದಿದ್ದರೆ ಆನ್‍ಲೈನ್ ಅಥವಾ ವಿಡಿಯೋ ಕಾನ್ಪರೆನ್ಸ್ ಮುಖಾಂತರವೂ ತಮ್ಮ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು. 

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಡಿಕೇರಿ ಆಯಾಯ ಬ್ಯಾಂಕ್ ಅಧಿಕಾರಿಗಳನ್ನು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿ ವಿರಾಜಪೇಟೆ ಮತ್ತು ಸೋಮವಾರಪೇಟೆ, ಸಹಾಯವಾಣಿ ಸಂಖ್ಯೆ  08272-222373 ನ್ನು ಸಂಪರ್ಕಿಸಬಹುದು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ಹೇಳಿದರು. ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,