Header Ads Widget

Responsive Advertisement

ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿಂದ ಕೇಶವ ಕಾಮತ್ ರಿಗೆ ಸನ್ಮಾನ

ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿಂದ ಕೇಶವ ಕಾಮತ್ ರಿಗೆ ಸನ್ಮಾನ


ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಂ.ಪಿ.ಕೇಶವ ಕಾಮತ್ ಅವರನ್ನು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಚೇಂಬರ್ ನ ಜಿಲ್ಲಾ ಸಮಿತಿಯ ಉಪಾಧ್ಯಕ್ಷರೂ ಆಗಿರುವ ಕೇಶವ ಕಾಮತ್ ಅವರ ಅವಧಿಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಪರ ಚಟುವಟಿಕೆ ಯಶಸ್ವಿಯಾಗಿ ನಡೆಯಲೆಂದು ಪ್ರಮುಖರು ಶುಭ ಹಾರೈಸಿದರು.

ಚೇಂಬರ್ ಅಧ್ಯಕ್ಷ ಎಂ.ಬಿ.ದೇವಯ್ಯ, ಪ್ರಧಾನ ಕಾರ್ಯದರ್ಶಿ ನವೀನ್ ಅಂಬೇಕಲ್, ಕೋಶಾಧಿಕಾರಿ ರವಿಉತ್ತಪ್ಪ, ಮಹಾ ಪೋಷಕ ಜಿ.ಚಿದ್ವಿಲಾಸ್, ರಾಜ್ಯ ನಿರ್ದೇಶಕ ಗಿರೀಶ್ ಗಣಪತಿ, ಸಂಘಟನಾ ಕಾರ್ಯದರ್ಶಿ ಮೋಂತಿ ಗಣೇಶ್, ಜಿಲ್ಲಾ ನಿರ್ದೇಶಕರಾದ ವೀರರಾಜು, ಜೋಸೆಫ್ ಶ್ಯಾಮ್, ನರಸಿಂಹನ್, ಶ್ರೀನಿವಾಸ್ ಹಾಗೂ ಶನಿವಾರಸಂತೆಯ ಸ್ಥಾನೀಯ ಸಮಿತಿ ಅಧ್ಯಕ್ಷ ಸರ್ದಾರ್ ಉಪಸ್ಥಿತರಿದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,