Header Ads Widget

Responsive Advertisement

"ಶಕ್ತಿ /ಇಂಧನ ಸಂರಕ್ಷಣೆ" ಕುರಿತು ಕೊಡಗು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ

"ಶಕ್ತಿ /ಇಂಧನ ಸಂರಕ್ಷಣೆ" ಕುರಿತು ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ


ಮಡಿಕೇರಿ: ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ವತಿಯಿಂದ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಹೊಂದಿರುವ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಕೇಂದ್ರ ಸರ್ಕಾರದ ಸ್ವಚ್ಚತಾ ಕ್ರಿಯಾ ಯೋಜನೆಯಡಿ "ಶಕ್ತಿ /ಇಂಧನ ಸಂರಕ್ಷಣೆ" ಕುರಿತು ಕೊಡಗು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.

ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ ಅವರು ನವೀಕರಿಸಲಾಗದ ನೈಸರ್ಗಿಕ ಸಂಪನ್ಮೂಲಗಳ ವ್ಯರ್ಥತೆಯನ್ನು ಕಡಿಮೆ ಮಾಡಿ ನಾವು ಭವಿಷ್ಯಕ್ಕಾಗಿ ಭೂ ಸಂಪನ್ಮೂಲ ಉಳಿಸಬೇಕಿದೆ ಎಂದರು.

ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಭವಿಷ್ಯಕ್ಕಾಗಿ ಶಕ್ತಿ ಮೂಲಗಳ ಸಂರಕ್ಷಣೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

"ಶಕ್ತಿ ಮತ್ತು ಇಂಧನ ಸಂರಕ್ಷಣೆ" ಕುರಿತು ಮಾಹಿತಿ ನೀಡಿದ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್‍ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಅವರು ಪ್ರಸ್ತುತ ಪೀಳಿಗೆ ಮತ್ತು ಮುಂದಿನ ಪೀಳಿಗೆಗೆ ಶಕ್ತಿ ಸಂರಕ್ಷಣೆಯ ಮಹತ್ವವನ್ನು ತಿಳಿಸಲು ಇಂತಹ ಜಾಗೃತಿ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ. ಮುಂದಿನ ಪೀಳಿಗೆಯವರ ಬದುಕು ಹಸನಾಗಲು ನಾವೆಲ್ಲರೂ ಶಕ್ತಿ ಮತ್ತು ಇಂಧನ ಮೂಲಗಳನ್ನು ಸಂರಕ್ಷಣೆಯೊಂದಿಗೆ ಪರ್ಯಾಯ ಇಂಧನ ಮೂಲಗಳ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.

ಮರು ನವೀಕರಣ ಮಾಡಲಾಗದ ನೈಸರ್ಗಿಕ ಸಂಪನ್ಮೂಲಗಳ ಮಹತ್ವನ್ನು ಇಲ್ಲಿ ಅರಿಯಬೇಕಿದೆ. ಶಕ್ತಿಯ ಸಂರಕ್ಷಣೆ ಒಂದು ಪ್ರಮುಖ ಹೆಜ್ಜೆಯಾಗಿದ್ದು, ಮುಂದಿನ ಪೀಳಿಗೆಗಳು ನಾಳೆ ಉಜ್ವಲವಾಗಿ ಬದುಕುವಂತೆ ನೋಡಿಕೊಳ್ಳಬೇಕು ಎಂದರು.

ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಶಿಕ್ಷಣಾಧಿಕಾರಿ ಕೆ.ಕಾಂತರಾಜು, ಮಡಿಕೇರಿ ಬಿ.ಆರ್.ಸಿ. ಪಿ.ಕೆ.ನಳಿನಿ, ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್.ಸುರೇಶ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಮ್ಮ, ಪ್ರೌಢಶಾಲಾ ವಿಜ್ಞಾನ ಶಿಕ್ಷಕಿ ಜನೆಟ್ ಇದ್ದರು.

ಸ್ಪರ್ಧೆಯ ವಿಜೇತರು: ಪ್ರಬಂಧ ಸ್ಪರ್ಧೆಯಲ್ಲಿ ಕ್ರಮವಾಗಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ. ವಿದ್ಯಾರ್ಥಿನಿ    ಸಂಜನಾ(ಪ್ರಥಮ),  ಮಡಿಕೇರಿ ಸಂತ ಮೈಕಲ್ಲರ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿಯಾನ್ ಕೆ.ಜಾನ್ಸನ್ (ದ್ವಿತೀಯ), ಪೆÇನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಎ.ವಿ.ಸಾನಿಯ ವಿದ್ಯಾರ್ಥಿನಿ (ತೃತೀಯ) ಮೊದಲ ಮೂರು ಸ್ಥಾನ ಪಡೆದರು.

ಮೊದಲ ಮೂರು ಸ್ಥಾನ ಪಡೆದ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳು ಕ್ರಮವಾಗಿ ರೂ.2 ಸಾವಿರ, ರೂ.1,500 ಹಾಗೂ ರೂ.750 ನಗದು ಬಹುಮಾನ ಗಳಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪರಿಸರ ಸಂರಕ್ಷಣೆ ಕುರಿತ ಪುಸ್ತಕಗಳನ್ನು ನೀಡಲಾಯಿತು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,