Header Ads Widget

Responsive Advertisement

ಮಡಿಕೇರಿ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ನಡೆದ ‘ವಿಶ್ವ ಬೈಸಿಕಲ್ ದಿನಾಚರಣೆ’


ಮಡಿಕೇರಿ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ನಡೆದ ‘ವಿಶ್ವ ಬೈಸಿಕಲ್ ದಿನಾಚರಣೆ’

ಮಡಿಕೇರಿ ಜೂ.03: ಪ್ರತಿಯೊಬ್ಬರೂ ಆರೋಗ್ಯದಿಂದ ಇದ್ದರೆ ದಿನನಿತ್ಯದ ಕೆಲಸ-ಕಾರ್ಯಗಳನ್ನು ಕ್ರೀಯಾಶೀಲತೆಯಿಂದ ನಿರ್ವಹಿಸಬಹುದು, ಆ ನಿಟ್ಟಿನಲ್ಲಿ ಸೈಕಲ್ ಜಾಥಾ ಪೂರಕವಾಗಲಿದೆ ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಮಡಿಕೇರಿ ಕಾವೇರಿ ಕಲಾವೃಂದ ಇವರ ಸಂಯುಕ್ತಾಶ್ರಯದಲ್ಲಿ ಆಜಾದಿಕ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ನಡೆದ ‘ವಿಶ್ವ ಬೈಸಿಕಲ್ ದಿನಾಚರಣೆ’ ಪ್ರಯುಕ್ತ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಸ್ವಾತಂತ್ರ್ಯ ದೊರೆತು 75 ವರ್ಷ ಪೂರ್ಣಗೊಂಡ ಹಿನ್ನೆಲೆ ಸರ್ಕಾರ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಸ್ವಾತಂತ್ರö್ಯ ಸಂರಕ್ಷಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಮಹಾನ್ ವ್ಯಕ್ತಿಗಳ ತ್ಯಾಗ-ಬಲಿದಾನಗಳ ಪ್ರತೀಕವಾಗಿ ಆಜಾದಿಕ ಅಮೃತ ಮಹೋತ್ಸವ ಸವಿನೆನಪಿಗಾಗಿ ಸರ್ಕಾರದಿಂದ ಹಲವು ಕಾರ್ಯಕ್ರ‍್ರಮ ಹಮ್ಮಿಕೊಳ್ಳಲಾಗಿದೆ. ರಾಷ್ಟç ಬಲಪಡಿಸುವುದು ಯುವ ಜನರ ಕೈಯಲ್ಲಿದೆ ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.

ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಅಧ್ಯಕ್ಷರಾದ ರವಿಕುಶಾಲಪ್ಪ ಅವರು ಮಾತನಾಡಿ ಪರಿಸರಕ್ಕೆ ಪೂರಕವಾದ ವ್ಯವಸ್ಥೆಗೆ ವಿಶ್ವದಲ್ಲೆಡೆ ಕೈಜೋಡಿಸುವ ಕೆಲಸ ಆಗಿದೆ. ಆ ನಿಟ್ಟಿನಲ್ಲಿ ಸೈಕಲ್ ಜಾಥಾವು ಪೂರಕವಾಗಿದೆ ಎಂದರು.

ಪರಿಸರ ನಾಶದಿಂದ ಶುದ್ಧಗಾಳಿ ಸಿಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಉಸಿರಾಡುವ ಗಾಳಿಯನ್ನು ಕೂಡ ಹಣ ಕೊಟ್ಟು ಖರೀದಿಸುವಂತಾಗಿದೆ. ಆ ದಿಸೆಯಲ್ಲಿ ಪರಿಸರ ಸಂರಕ್ಷಿಸುವ ಕೆಲಸ ಯುವಪೀಳಿಗೆಗಳಿಂದ ಆಗಬೇಕು ಎಂದರು.

ಕಾವೇರಿ ನದಿ ತೀರದ ಪ್ರದೇಶಗಳಲ್ಲಿ ಗಿಡಗಳನ್ನು ನೆಡುವ ಕೆಲಸ ಆಗಬೇಕಾಗಿದೆ. ಮುಂದಿನ ದಿನದಲ್ಲಿ ಜಿಲ್ಲಾಡಳಿತದ ಜೋತೆಗೂಡಿ ಕಾವೇರಿ ನದಿ ತೀರದ ಪ್ರದೇಶಗಳಲ್ಲಿ ಗಿಡ ಬೆಳೆಸಲಾಗುವುದು. ಪಶ್ಚಿಮ ಘಟ್ಟಗಳನ್ನು ಉಳಿಸುವುದರ ಜೊತೆಗೆ ಇಡೀ ರಾಜ್ಯವನ್ನು ಪರಿಸರ ಮಯವಾಗಿ ಮಾಡಬೇಕಾಗಿದೆ ಎಂದು ರವಿಕುಶಾಲಪ್ಪ ಅವರು ಹೇಳಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಸ್ವಾತಂತ್ರö್ಯ ಬಂದು ಎಪ್ಪತ್ತೈದು ವರ್ಷ ಆಚರಿಸುವ ಈ ಸಂದರ್ಭದಲ್ಲಿ ಎಲ್ಲರೂ ಕೂಡ ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು.

ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಮಹನೀಯರನ್ನು ಈ ಸಂದರ್ಭದಲ್ಲಿ ನೆನೆಯುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಸೈಕ್ಲಿಂಗ್ ಆರೋಗ್ಯಕರ ಮತ್ತು ಕ್ರೀಡಾ ಚಟುವಟಿಕೆಯಾಗಿದ್ದು ಪ್ರತಿನಿತ್ಯ ಕನಿಷ್ಟ 5 ಕಿಲೋಮೀಟರ್ ಸೈಕ್ಲಿಂಗ್ ಮಾಡಿದರೆ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬಹುದು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಆಜಾದಿಕ ಅಮೃತ ಮಹೋತ್ಸವ ಸವಿನೆನಪಿಗಾಗಿ ಸೈಕಲ್ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ 7.5 ಕಿಲೋಮೀಟರ್ ಸೈಕ್ಲಿಂಗ್ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿದೆ ಎಂದರು.

ನಗರಸಭೆ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಸೈಕ್ಲಿಂಗ್ ಮೂಲಕ ಆಗಿದೆ. ಮಕ್ಕಳೆಲ್ಲರೂ ಕೂಡ ಉತ್ಸಾಹದಿಂದ ಸೈಕಲ್ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲರೂ ಕೂಡ ಸೈಕ್ಲಿಂಗ್ ಮಾಡಬೇಕು. ಇದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಲು ಸಹಾಯಕವಾಗಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರು ಮಾತನಾಡಿ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು ಸೈಕ್ಲಿಂಗ್ ಸಹಕಾರಿಯಾಗಿದೆ ಎಂದರು. 

ಸೈಕ್ಲಿಂಗ್ ಒಂದು ಆರೋಗ್ಯಕರ ಮತ್ತು ಕ್ರೀಡಾ ಚಟುವಟಿಕೆಯಾಗಿದ್ದು, ಸೈಕ್ಲಿಂಗ್‌ನಲ್ಲಿ ಎಲ್ಲರೂ ತೊಡಗುವಂತಾಗಬೇಕು. ಕ್ರೀಡೆ ಒಂದು ಆರೋಗ್ಯಕರ ಚಟುವಟಿಕೆಯಾಗಿದ್ದು ಯುವಜನರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಅವರು ಸಲಹೆ ಮಾಡಿದರು. 

ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಸೈಕ್ಲಿಂಗ್ ಯಾವತ್ತೂ ಮರೆಯಬೇಡಿ. ಇದೊಂದು ದೈಹಿಕ ಮತ್ತು ಸಾಮರ್ಥ್ಯ ಜೀವನಕ್ಕೆ ಸಹಕಾರಿ ಎಂದರು.   

ಸೈಕಲ್ ಜಾಥಾ ನಗರದ ಕೋಟೆ ಆವರಣದಿಂದ ಆರಂಭಗೊಂಡು ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಚೌಕಿ, ಕಾಲೇಜು ರಸ್ತೆ, ಖಾಸಗಿ ಬಸ್ ನಿಲ್ದಾಣ, ರಾಜಸೀಟು ರಸ್ತೆ, ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಮೂಲಕ ಕೋಟೆ ಆವರಣಕ್ಕೆ ತಲುಪಿತು.

ಸೈಕಲ್ ಜಾಥಾದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಜಿಲ್ಲಾಧಿಕಾರಿ ಅವರ ಮಕ್ಕಳು ಸೈಕಲ್ ಜಾಥಾದಲ್ಲಿ ಪಾಲ್ಗೊಂಡು ಗಮನ ಸೆಳೆದರು. 

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ನೆಹರು ಯುವ ಕೇಂದ್ರದ ಅಧಿಕಾರಿ ಉಲ್ಲಾಸ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಇತರರು ಇದ್ದರು. ಇಂದುಮತಿ ಪ್ರಾರ್ಥಿಸಿದರು, ಸುಕುಮಾರ್ ಅವರು ಸ್ವಾಗತಿಸಿ, ವಂದಿಸಿದರು.