Header Ads Widget

Responsive Advertisement

ಕೆ.ವಿ.ಕೆ,ಗೋಣಿಕೊಪ್ಪಲುವಿನಿಂದ ನಂಜಾಣು ಪೀಡಿತ ಕಾಳುಮೆಣಸಿನ ಬಳ್ಳಿಗಳ ನಿರ್ವಹಣೆಯ ಪ್ರಾತ್ಯಕ್ಷಿಕೆ

ಕೆ.ವಿ.ಕೆ,ಗೋಣಿಕೊಪ್ಪಲುವಿನಿಂದ ನಂಜಾಣು ಪೀಡಿತ ಕಾಳುಮೆಣಸಿನ ಬಳ್ಳಿಗಳ ನಿರ್ವಹಣೆಯ ಪ್ರಾತ್ಯಕ್ಷಿಕೆ


ಕಾಳುಮೆಣಸು ಕೊಡಗು ಜಿಲ್ಲೆಯ ಬಹು ವಾರ್ಷಿಕ ಸಾಂಬಾರು ಬೆಳೆ. ಇದನ್ನು ಕಾಫಿ, ಅಡಿಕೆ, ಏಲಕ್ಕಿ ತೋಟದಲ್ಲಿ ಅಂತರ ಬೆಳೆಯಾಗಿ ಜಿಲ್ಲೆಯಾದ್ಯಂತಹ ಬೆಳೆಯಲಾಗುತ್ತಿದೆ. ಇತ್ತೀಚೆಗೆ ಕಾಳು ಮೆಣಸು ಬೆಳೆಗೆ ಅನೇಕ ರೋಗಗಳು ತೀವ್ರಗತಿಯಲ್ಲಿ ಕಂಡುಬರುತ್ತಿದ್ದು ಕೃಷಿಕನಿಗೆ ಹೆಚ್ಚು ಆರ್ಥಿಕ ಹಾನಿಯನ್ನುಂಟು ಮಾಡುತ್ತೀವೆ. ಅದರಲ್ಲಿಯೂ ಮುಖ್ಯವಾಗಿ ಇತ್ತೀಚಿಗೆ ಕೊಡಗು ಜಿಲ್ಲೆಯಾದ್ಯಂತಹ ಕಾಫಿ, ತೋಟದಲ್ಲಿ ಬೆಳೆಸಲಾಗುತ್ತೀರುವ ಕಾಳುಮೆಣಸಿನ ಬಳ್ಳಿಗಳಲ್ಲಿ ಎಲೆಗಳು ಚಿಕ್ಕದಾಗಿ,ಬಳ್ಳಿಗಳು ಸಾಯುವುದು ಇಲ್ಲಾ ಅಥವಾ ಬೆಳವಣಿಗೆಯೂ ಇಲ್ಲದೆ, ಕಾಳುಮೆಣಸು ಬಿಡದೆ ಇರುವ ಬಳ್ಳಿಗಳು ದಿನೆ ದಿನೆ ಹೆಚ್ಚಾಗುತ್ತೀರುತ್ತವೆ. ಇದಕ್ಕೆ ಮೂಲ ಕಾರಣ ನಂಜಾಣುವಿನ ಭಾದೆಗೆ ತುತ್ತಾಗುತ್ತೀರುವುದು.

ಈ ನಿಟ್ಟಿನಲ್ಲಿ ಭಾ.ಕೃ.ಅ.ಪ - ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ಕೊಡಗು ಜಿಲ್ಲೆ ಇವರ ವತಿಯಿಂದ ನಂಜಾಣುವಿನ ಭಾದೆಗೆ ತುತ್ತಾಗಿರುವ ಬಳ್ಳಿಗಳನ್ನು ಪುನಸ್ಚೇತನಗೂಳಿಸಲು ಭಾರತೀಯ ಸಾಂಬಾರು ಬೆಳೆಗಳ ಸಂಶೋಧನ ಸಂಸ್ಥೆ,ಕ್ಯಾಲಿಕಟ್ ಇವರು ಶಿಪಾರಸ್ಸು ಮಾಡಿರುವ ಸಮಗ್ರ  ತಂತ್ರಜ್ಞಾನಗಳ ಪರಿಚಯವನ್ನು ರೈತರಿಗೆ ತಿಳಿಸಲು ಜಿಲ್ಲೆಯ 10 ತೋಟಗಳಲ್ಲಿ ಮೂಂಚೂಣಿ  ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. 

ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು ಇದರ ಸಸ್ಯ ಸಂರಕ್ಷಣಾ ತಜ್ಞರಾದ ಡಾ.ವೀರೇಂದ್ರ ಕುಮಾರ್ ಕೆ.ವಿ ಇವರು ವಿವಿಧ ಸಮಗ್ರ ರೋಗ ನಿರ್ವಹಣಾ ತಂತ್ರಜ್ಞಾನಗಳಾದ ವರ್ಷದಲ್ಲಿ ಎರಡು ಬಾರಿ ಅಂದರೆ ಜೂನ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಪೆಪ್ಪೆರ್ ಸ್ಪೇಷಲ್ ಮತ್ತು ಸಮುದ್ರ ಕಳೆಯ ಸಿಂಪರಣೆ, ಕಹಿ ಬೇವಿನ ಹಿಂಡಿಯ ಪುಡಿಯನ್ನು ಬುಡಕ್ಕೆ ಹಾಕುವ ಮತ್ತು ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಬುಡಕ್ಕೆ ಸುರಿಯುವ, ಡಿಸೆಂಬರ್ ತಿಂಗಳಿನಲ್ಲಿ ಪೊಟ್ಯಾಷಿಂ ನೈಟ್ರೇಟ್‌ನ ಸಿಂಪರಣೆಯನ್ನು ಮಾಡುವ ಪ್ರಾತ್ಯಕ್ಷಿಕೆಯನ್ನು ಕೊಣನಕಟ್ಟೆಯ ಕುಶಾಲಪ್ಪನವರ ತೋಟದಲ್ಲಿ ತೋರಿಸಿಕೊಟ್ಟರು. ಈ ಸಮಗ್ರ ತಂತ್ರಜ್ಞಾನಗಳನ್ನು ಕಾಳುಮೆಣಸಿನ ತೋಟಗಳಲ್ಲಿ ಅಳವಡಿಕೊಂಡರೆ ನಂಜಾಣುವಿನ ಭಾದೆಗೆ ತುತ್ತಾಗಿರುವ ಬಳ್ಳಿಗಳನ್ನು ಪುನಸ್ಚೇತನಗೂಳಿಸಬಹುದು ಎಂದು ತಿಳಿಸಿದರು.